ನಮಸ್ತೆ
ಶುಭೋದಯ – ಇಂದು ರಥ ಸಪ್ತಮಿ, ಮಾರ್ಗಶೀರ್ಷ ಶುಕ್ಲ ಪಕ್ಷದ ಏಳನೆಯ ದಿನ, ರಥ ಸಪ್ತಮಿ.
ಈ ವ್ರತಾಚರಣೆಯ ಬಗ್ಗೆ ಒಂದೆರಡು ಮಾತುಗಳನ್ನು ಕಳೆದವರ್ಷ ತಿಳಿಸಿದ್ದೆ. ಅದು ಇಲ್ಲಿದೆ
ಮತ್ತೆ ಇಲ್ಲಿ ಕೆಳಗೆ ಅದರ ಒಕ್ಕಣಿಕೆಯನ್ನು ನೀಡುತ್ತಿರುವೆ.
ಓಂ ಭದ್ರಂ ಕರ್ಣೇಭಿಶೃಣುಯಾಮ ದೇವಾ:|
ಭದ್ರಂ ಪಶ್ಯೇಮಾಕ್ಷಭಿರ್ಯಜತ್ರಾ:|
ಸ್ಥಿರೈರಂಗೈಸ್ತುಷ್ಟುವಾಗ್ಂಸಸ್ತನೂಭಿ:|
ವ್ಯಶೇಮ ದೇವಹಿತಂ ಯದಾಯು:|
ಸ್ವಸ್ತಿ ನ ಇಂದ್ರೋ ವೃದ್ಧಶ್ರವಾ:|
ಸ್ವಸ್ತಿ ನ: ಪೂಷಾ ವಿಶ್ವವೇದಾ:|
ಸ್ವಸ್ತಿನಸ್ತಾರ್ಕ್ಷ್ಯೋ ಅರಿಷ್ಟನೇಮಿ:|
ಸ್ವಸ್ತಿನೋ ಬೃಹಸ್ಪತಿರ್ದಧಾತು|
ಓಂ ಶಾಂತಿ: ಶಾಂತಿ: ಶಾಂತಿ:||
ಇಂದು ರಥ ಸಪ್ತಮಿ. ಮಾರ್ಗಶೀರ್ಷ ಮಾಸ ಶುಕ್ಲಪಕ್ಷದ ಏಳನೆಯದಿನ. ಜಗತ್ತಿನ ಮುಂದುವರಿಕೆಗೆ ಚಾಲಕನಾದ ಶ್ರೀ ಸೂರ್ಯ ಭಗವಾನನು ಸಿಂಹ ರಾಶಿಯಿಂದ ಮಕರ ರಾಶಿಗೆ ತನ್ನ ರಥವನ್ನೇರಿ ಹೋಗುತ್ತಾನೆ. ಅಂದರೆ ಇಂದಿಗೆ ಛಳಿಗಾಲವು ಮುಗಿದು ಬೇಸಗೆಯ ಕಾಲವು ಪ್ರಾರಂಭವಾಗುವುದು. ಸೂರ್ಯನು ತನ್ನ ಏಳು ಕುದುರೆಗಳ ರಥವನ್ನೇರುವನು. ಅವನ ರಥದ ಸಾರಥಿ ಅರುಣ. ಇಂದು ವೇದ ಮಂತ್ರಗಳ ಭಾಗವಾದ ಕೃಷ್ಣ ಯಜುರ್ವೇದ ತೈತ್ತಿರೀಯಾರಣ್ಯಕದಲ್ಲಿ ಪ್ರಸ್ತಾಪಿಸಿರುವ ಅರುಣಪ್ರಶ್ನ ರೀತ್ಯಾ ಸೂರ್ಯ ನಮಸ್ಕಾರಗಳನ್ನು ಮಾಡುವುದು ಪದ್ಧತಿ.
ಸೂರ್ಯನ ರಥಕ್ಕೆ ಏಳು ಕುದುರೆಗಳು. ಅವುಗಳ ಹೆಸರುಗಳು ಗಾಯತ್ರಿ, ಬೃಹತೀ, ಉಷ್ಣಿಕ್, ಜಗತೀ, ತ್ರಿಷ್ಟುಪ್, ಅನುಷ್ಟುಪ್ ಮತ್ತು ಪಂಕ್ತಿ.
ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದ ಇತ್ಯಾದಿಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರೂಢಿಯಲ್ಲಿದೆ. ಸೂರ್ಯನ ೧೦೮ ಹೆಸರುಗಳನ್ನು ಉಚ್ಚರಿಸಿ ನಮಸ್ಕಾರಗಳನ್ನು ಮಾಡುವರು. ಮನೆಯ ಒಂದು ಕೋಣೆಯಲ್ಲಿ ಪೂರ್ಣವಾಗಿ ಒಂದು ಸುತ್ತು ಪ್ರದಕ್ಷಿಣೆ ಹಾಕುತ್ತಾ ಅರುಣ ಪ್ರಶ್ನದ ಮಂತ್ರ ಪಠಿಸಿ ನಮಸ್ಕಾರ ಮಾಡುವರು. ಹೀಗೆ ೧೦೮ ನಮಸ್ಕಾರಗಳನ್ನು ಮಾಡುವರು. ೧೦೮ ಆಗದಿದ್ದವರು ೧೨ ನಾಮಗಳನ್ನು ಜಪಿಸಿ ನಮಸ್ಕಾರ ಮಾಡುವರು. ಅವಾವುದೆಂದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ. ಈ ಹನ್ನೆರಡು ಹೆಸರುಗಳು ಹನ್ನೆರಡು ತಿಂಗಳುಗಳ ಸೂಚಕ. ಇದೇ ತರಹ ಸೂರ್ಯನಿಗೆ ಇನ್ನೂ ಹನ್ನೆರಡು ಹೆಸರುಗಳಿವೆ. ಅವುಗಳು ಯಾವುವೆಂದರೆ, ಆದಿತ್ಯ, ಸವಿತಾ, ಸೂರ್ಯ, ಮಿಹಿರ, ಅರ್ಕ, ಪ್ರಭಾಕರ, ಮಾರ್ತಾಂಡ, ಭಾಸ್ಕರ, ಭಾನು, ಚಿತ್ರಭಾನು, ದಿವಾಕರ ಮತ್ತು ರವಿ. ೧೨ ಜನ ಋತ್ವಿಕರನ್ನು ಮನೆಗೆ ಕರೆಯಿಸಿ ನಮಸ್ಕಾರ ಮಾಡಿಸುವುದೂ ರೂಢಿಯಲ್ಲಿದೆ. ಆ ಹನ್ನೆರಡು ಜನ ಋತ್ವಿಕರ ಅರುಣ ಪ್ರಶ್ನ್ಯ ರೀತ್ಯಾ ಒಂದು ನಮಸ್ಕಾರವನ್ನು ೧೨ ಎಂದು ಲೆಕ್ಕಕ್ಕೆ ತೆಗೆದುಕೊಳ್ಳುವರು. ಆ ಸಂದರ್ಭದಲ್ಲಿ ಸೂರ್ಯನಿಗೆ ಪ್ರಿಯವಾದ ರವೆಯ ಪಾಯಸವನ್ನು ನೈವೇದ್ಯಕ್ಕಿರಿಸಿ, ಅದನ್ನು ಪ್ರಸಾದವಾಗಿ ಋತ್ವಿಕರಿಗೆ ಕೊಡುವರು ಮತ್ತು ಇತರರೂ ಸೇವಿಸುವರು.
ಒರಿಸ್ಸಾ ರಾಜ್ಯದಲ್ಲಿನ ಕೊನಾರ್ಕದ ಸೂರ್ಯನ ದೇವಸ್ಥಾನ, ಗಯಾದ ದಕ್ಷಿಣಾರ್ಕ ದೇವಸ್ಥಾನ, ರಾಜಸ್ಥಾನದ ರಾನಕ್ಪುರ, ಗುಜರಾತ್ ರಾಜ್ಯದ ಮೊಧೆರಾ, ಮಧ್ಯಪ್ರದೇಶದ ಉನಾವು (ಚರ್ಮ ರೋಗಗಳ ನಿವಾರಣೆಗಾಗಿ ಜನರು ಇಲ್ಲಿಗೆ ಹೋಗುವರು), ಅಸ್ಸಾಮಿನ ಗೋಲ್ಪರ, ಆಂಧ್ರಪ್ರದೇಶದ ಅರಸವಲ್ಲಿ, ತಮಿಳುನಾಡಿನ ಕುಂಭಕೋಣಂನ ಸೂರ್ಯನ ದೇವಸ್ಥಾನ ಇವುಗಳು ಭಾರತದಲ್ಲಿರುವ ಪ್ರಮುಖ ದೇವಸ್ಥಾನಗಳು.
ಪುರಾಣಗಳ ಪ್ರಕಾರ ಸೂರ್ಯನಿಗೆ ಇಬ್ಬರು ಪತ್ನಿಯರು – ಸಂಜನಾ ಮತ್ತು ಛಾಯಾ. ಅವನ ಮಕ್ಕಳಲ್ಲಿ ಪ್ರಮುಖರೆಂದರೆ, ಮನು, ಯಮ, ಯಮುನಾ, ಕರ್ಣ, ಸುಗ್ರೀವ ಇತ್ಯಾದಿ. ಶ್ರೀ ರಾಮನು ಸೂರ್ಯನ ವಂಶಸ್ತನು.
3 replies on “ರಥ ಸಪ್ತಮಿ”
very beautiful.
i want to know mr infrnatn on the relatinshp btwn surya and aruna
ಪ್ರಿಯ ಬ್ಲಾಗಿಗರೆ,
ಕಣಜ ಜಾಲತಾಣ (www.kanaja.in) ಕರ್ನಾಟಕ ಜ್ಞಾನ ಆಯೋಗದ ಮಹತ್ವದ ಕನ್ನಡ ಅಂತರಜಾಲ ಜ್ಞಾನಕೋಶ ಯೋಜನೆ. ಈ ಯೋಜನೆಯು ಕನ್ನಡಿಗರಿಗಾಗಿಯೇ ರೂಪುಗೊಳ್ಳುತ್ತಿರುವ ಜಾಲತಾಣ. ಈ ಜಾಲತಾಣದ ಬಗ್ಗೆ ನಿಮ್ಮ ಬ್ಲಾಗಿನಲ್ಲೂ ಸೂಕ್ತ ಪ್ರಚಾರ ಸಿಗಬೇಕೆಂಬುದು ನಮ್ಮ ವಿನಂತಿ. ದಯಮಾಡಿ (http://kanaja.in/?page_id=10877) ಈ ಕೊಂಡಿಯಲ್ಲಿ ಇರುವ `ಕಣಜ’ ಬ್ಯಾನರುಗಳನ್ನು ನಿಮ್ಮ ಬ್ಲಾಗಿನಲ್ಲಿ ಪ್ರಕಟಿಸಬೇಕೆಂದು ಕೋರಿಕೆ. ಇಲ್ಲಿ ಕೊಟ್ಟಿರುವ ಚಿತ್ರದ ಕೆಳಗೆ ಇರುವ ಸಂಕೇತ ವಾಕ್ಯವನ್ನು ನಿಮ್ಮ ಬ್ಲಾಗಿನ ಹೊಸ ಬ್ಲಾಗ್ ಪ್ರಕಟಣೆ ಜಾಗದಲ್ಲಿ ಪೇಸ್ಟ್ ಮಾಡಿದರೆ ಕಣಜದ ಬ್ಯಾನರ್ ನಿಮ್ಮಲ್ಲಿ ಪ್ರಕಟವಾಗುತ್ತದೆ. ಎಂಬೆಡ್ ಮಾಡುವ ಬಗೆ ಹೇಗೆಂದು ತಿಳಿಯಬೇಕಿದ್ದರೆ ದಯಮಾಡಿ (projectmanager@kanaja.in) ಈ ಮೈಲಿಗೆ ಕಾಗದ ಬರೆಯಿರಿ.
ಕಣಜ ಜಾಲತಾಣದಲ್ಲಿ ನಿಮ್ಮ ಬ್ಲಾಗುಗಳನ್ನೂ ಪಟ್ಟೀಕರಿಸಲಾಗಿದೆ, ಗಮನಿಸಿ. ಬ್ಲಾಗ್ ಲೋಕದ ಮಾಹಿತಿ ಲೇಖನಗಳು ಕನ್ನಡಕ್ಕೆ ಕೊಡುಗೆ ನೀಡುತ್ತಿರುವುದನ್ನು ಸ್ವಾಗತಿಸುತ್ತ `ಕಣಜ’ವನ್ನೂ ನಿಮ್ಮ ಸಹ-ಬ್ಲಾಗ್ ಎಂದೇ ಪರಿಗಣಿಸಿ ಬೆಂಬಲ ನೀಡಿ, ಪ್ರಚಾರ ನೀಡಿ ಎಂದು ವಿನಂತಿಸಿಕೊಳ್ಳುವೆವು.
ತಮ್ಮ ವಿಶ್ವಾಸಿ
ಬೇಳೂರು ಸುದರ್ಶನ
ಸಲಹಾ ಸಮನ್ವಯಕಾರ, ಕಣಜ ಯೋಜನೆ
(ಕರ್ನಾಟಕ ಜ್ಞಾನ ಆಯೋಗದ ಯೋಜನೆ)
ಈ ಮೈಲ್: projectmanager@kanaja.net
http://www.kanaja.in
ವಿಳಾಸ: ಇಂಟರ್ ನ್ಯಾಶನಲ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ ಬೆಂಗಳೂರು
ನಂ 26/ಸಿ, ಎಲೆಕ್ಟ್ರಾನಿಕ್ಸ್ ಸಿಟಿ, ಹೊಸೂರು ರಸ್ತೆ
ಬೆಂಗಳೂರು – 560100
ದೂರವಾಣಿ: ೯೭೪೧೯೭೬೭೮೯